• About
  • Advertise
  • Privacy & Policy
  • Contact
Monday, May 12, 2025
Good Governance News
  • Home
  • Chief Ministers
  • IAS NEWS
  • World
  • National
  • States
  • Politics
  • Elections 2022
  • YouTube Channel
No Result
View All Result
  • Home
  • Chief Ministers
  • IAS NEWS
  • World
  • National
  • States
  • Politics
  • Elections 2022
  • YouTube Channel
No Result
View All Result
Good Governance News
No Result
View All Result
Home States Karnataka

ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

John Prem by John Prem
September 19, 2024
in Karnataka, Latest, States
0
ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ
0
SHARES
1
VIEWS
Share on FacebookShare on Twitter

ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸಮಿತಿಯೊಂದನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ ಎಂದು ವಿಪ ಶಾಸಕರಾದ ದಿನೇಶ ಗೂಳಿಗೌಡ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮ್ಮ ಮನವಿಗೆ ಸ್ಪಂದಿಸಿ ಕ್ರಮ ವಹಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಪೋಶಕರ ಪರವಾಗಿ, ವಿದ್ಯಾರ್ಥಿಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದೇ ವರ್ಷ ಜನವರಿ 16 ರಂದು ಶಾಸಕರಾದ ದಿನೇಶ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ರಾಜ್ಯದಲ್ಲಿ ಮಾದಕ ದ್ರವ್ಯದ ಹಾವಳಿ ಹೆಚ್ಚುತ್ತಿದೆ.

ಕಾಲೇಜ್‌ಗಳ ಸುತ್ತಲಿನ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆ. ಭವಿಷ್ಯದ ಭಾರತದ ಕನಸುಗಳಾದ ಯುವ ಜನರು ದಾರಿ ತಪ್ಪುತ್ತಿದ್ದಾರೆ. ಇದನ್ನು ತಡೆಯಲು ಪೊಲೀಸ್‌ ಇಲಾಖೆ ಕ್ರಮ ವಹಿಸಬೇಕು. ಜಾಗೃತಿ ಕಾಯಕ್ರಮಗಳನ್ನು ಆಯೋಜಿಸಬೇಕು ಎಂದು ಮನವಿ ಮಾಡಿದ್ದರು. ಈ ಸಂಬಂಧ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಪೊಲೀಸ್‌ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದರು.

ಪತ್ರದ ಭಾಗವಾಗಿ ಬುಧವಾರ ವಿಧಾನ ಸೌಧದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು ಈ ಮಾದಕ ದ್ರವ್ಯ ಹಾವಳಿ ತಡೆಯಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದಾರೆ. ಮಾತ್ರವಲ್ಲದೇ, ಕ್ರಮ ವಹಿಸಲು ಪೊಲೀಸ್‌ ಮಹಾ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಯುವ ಜನತೆಯ ಬಗ್ಗೆ ಕಾಳಜಿ ವಹಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ದಿನೇಶ ಗೂಳಿಗೌಡ ತಿಳಿಸಿದ್ದಾರೆ.

Tags: BengaluruGG NewsKarnataka
Previous Post

Expedited implementation of Automated Testing Station, Vehicle Location Tracking System; Quick action in transport department

Next Post

ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್

Next Post
ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್

ಸಾರ್ವಜನಿಕರು/ಕಕ್ಷಿದಾರರ ಹೆಚ್ಚಿನ ಅನುಕೂಲಕ್ಕಾಗಿ ಲೋಕ್ ಆದಾಲತ್‌ನ ಪ್ರಯೋಜನವನ್ನು ಜನಪ್ರಿಯಗೊಳಿಸಲು ಮಾಧ್ಯಮಗಳ ಸಹಕಾರ ಅತ್ಯಗತ್ಯ -ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್

Good Governance News

© 2024 Newsmedia Association of India - Maintained by JMIT.

  • About
  • Advertise
  • Privacy & Policy
  • Contact

No Result
View All Result

© 2024 Newsmedia Association of India - Maintained by JMIT.